ಅಭಿಪ್ರಾಯ / ಸಲಹೆಗಳು

ಇಸ್ಪೇಟ್‌ ಜೂಜಾಟ ದಾಳಿ

1) ದಿನಾಂಕಃ 20-09-2022 ರಂದು ಕನಕಗಿರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಚಿರ್ಚನಗುಡ್ಡ ಸೀಮಾದ ಶ್ರೀ ತಾಯಮ್ಮ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 8 ಜನ ಆರೋಪಿತರು ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಅಂದರ-ಬಾಹರ್ ಎಂಬ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ್ಗೆ ಮಾನ್ಯ ಡಿ.ಎಸ್.ಪಿ., ಗಂಗಾವತಿ ರವರ ಮಾರ್ಗ ದರ್ಶನದಲ್ಲಿ, ಶ್ರೀ ವಿ.ನಾರಾಯಣ ಪಿ.ಐ. ಕನಕಗಿರಿ ಠಾಣೆ, ಹಾಗೂ ಶ್ರೀಮತಿ ಶಾರದಮ್ಮ, ಮ.ಪಿ.ಎಸ್.ಐ.,ಗಂಗಾವತಿ (ಗ್ರಾ) ಠಾಣೆ ಹಾಗೂ ಸಿಬ್ಬಂದಿಯವರು ಮತ್ತು ಪಂಚರ ಸಮಕ್ಷಮದಲ್ಲಿ ಹೋಗಿ ದಾಳಿ ಮಾಡಿ ಆರೋಪಿತರನ್ನು ಹಿಡಿದುಕೊಂಡಿದ್ದು, ಸಿಕ್ಕ ಬಿದ್ದ ಆರೋಪಿತರಿಂದ ಇಸ್ಪೀಟ್ ಜೂಜಾಟದ ನಗದು ಹಣ ರೂ. 62,760=00 ಗಳನ್ನು ಮತ್ತು ಇಸ್ಪೀಟ್ ಜೂಜಾಟದ ಸಾಮಾಗ್ರಿಗಳನ್ನು ಪಂಚರ ಸಮಕ್ಷಮ ಜಪ್ತಿ ಮಾಡಿಕೊಂಡು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

 

2) ದಿನಾಂಕ 20-09-2022 ರಂದು ಯಲಬುರ್ಗಾ ಪೊಲೀಸ್‌ ಠಾಣಾ ವ್ಯಾಪ್ತಿಯ ಮುದೋಳ ಗ್ರಾಮದ ಭಜೇಂತ್ರಿ ಕಾಲೋನಿಯ ಅಶೋಕ ಭಜೇಂತ್ರಿ ರವರ ಮನೆಯ ಹತ್ತಿರದ ಸಿ.ಸಿ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಸುಮಾರು 8 ಜನ ಆರೋಪಿತರು ದುಂಡಾಗಿ ಕುಳಿತುಕೊಂಡು ಇಸ್ಪೀಟ ಎಲೆಗಳ ಸಹಾಯದಿಂದ ಅಂದರ-ಬಾಹರ ಜೂಜಾಟದಲ್ಲಿ ತೊಡಗಿದ್ದಾಗ ಹುಲಗೇಶ ಪಿ.ಎಸ್.ಐ ಯಲಬುರ್ಗಾ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ದಾಳಿ ಮಾಡಿದ ಕಾಲಕ್ಕೆ 06 ಜನ ಸಿಕ್ಕಿ ಬಿದ್ದಿದ್ದು, ಇನ್ನು ಇಬ್ಬರು ಆರೋಪಿತರು ಓಡಿ ಹೋಗಿರುತ್ತಾರೆ. ಸಿಕ್ಕವರ ಕಡೆಯಿಂದ ಜೂಜಾಟಕ್ಕೆ ಬಳಿಸಿದ ನಗದು ಹಣ 7,600/- ರೂ, ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 21-09-2022 11:25 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080