ಅಭಿಪ್ರಾಯ / ಸಲಹೆಗಳು

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ : 16-01-2022 ರಂದು ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಚೆಳಗೇರಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಕೋವಿಡ್-19 ಇದ್ದರೂ ಸಹ 14 ಜನ ಆರೋಪಿತರು ಅಂದರ ಬಾಹರ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ತಿಮ್ಮಣ್ಣ ಪಿ.ಎಸ್.ಐ ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ 84,650=00 ರೂಪಾಯಿಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ : 15-01-2022 ರಂದು ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳಮಳ್ಳಿ ಗುಡ್ಡದ ಹತ್ತಿರ ತುಗ್ಗಲಿ ಮರದ ಕೆಳಗಡೆ ಸಾರ್ವಜನಿಕ ಸ್ಥಳದಲ್ಲಿ ಕೋವಿಡ್-19 ಇದ್ದರೂ ಸಹ 10 ಜನ ಆರೋಪಿತರು ಅಂದರ ಬಾಹರ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀಮತಿ ವೈಶಾಲಿ ಝಳಕಿ ಪಿ.ಎಸ್.ಐ. ತಾವರಗೇರಾ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ 6,010=00 ರೂಪಾಯಿಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಮಟಕಾ ಜೂಜಾಟ ದಾಳಿ.

ದಿನಾಂಕ : 15-01-2022 ರಂದು ಹನಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಯರಗೇರಿ  ಗ್ರಾಮದ ಬಸ್ ನಿಲ್ದಾಣದ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರಾದ 1]ಮಲ್ಲಪ್ಪ ತಂದಿ ಕಳಕಪ್ಪ ಕ್ಯಾದಿಗುಪ್ಪಿ ಸಾ: ಬಾದಿಮನಾಳ 2] ಶಿವಪುತ್ರಪ್ಪ ತಂದಿ ಕಲ್ಲಪ್ಪ ಹರಿಜನ ಸಾ: ಬಂಡಿಹಾಳ 3]ಕರಿಶಿದ್ದಪ್ಪ ತಂದಿ ಶರಣಪ್ಪ ಪಲ್ಲೇದ ಸಾ: ಮುಧೋಳ ತಾ: ಯಲಬುರ್ಗಾ 4] ಶರಣಪ್ಪ ಹಾದಿಮನಿ ಸಾ: ಜೂಲಕಟ್ಟಿ ಇವರು ಮಟಕಾ ಜೂಜಾಟ ತೊಡಗಿದ್ದಾಗ ಶ್ರೀ ಅಶೋಕ ಬೇವೂರ ಪಿ.ಎಸ್.ಐ. ಹನಮಸಾಗರ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ 1100=00 ರೂಪಾಯಿಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಅಕ್ರಮ ಮದ್ಯ ಮಾರಾಟ ದಾಳಿ.

ದಿನಾಂಕ : 15-01-2022 ರಂದು ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಸಿಂಧೋಗಿ ಗ್ರಾಮದ ಆರೋಪಿತನ ಮನೆಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ದೇವೇಂದ್ರಪ್ಪ ತಂದೆ ಸಿದ್ದಪ್ಪ ಮಣ್ಣಮ್ಮನವರ ಸಾ: ಹಿರೇಸಿಂದೋಗಿ ಇತನು ಯಾವುದೇ ಪರವಾನಿಗೆ ಮತ್ತು ದಾಖಲಾತಿ ಇಲ್ಲದೇ ಅನಧಿಕೃತವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ ಶ್ರೀ ಶೈಲಾ ಎಸ್. ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ 11,851=00 ರೂ ಬೆಲೆಬಾಳುವ ಮದ್ಯವನ್ನು ಜಪ್ತಿ ಮಾಡಿ ಆರೋಪಿತರು ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ : 15-01-2022 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪಳ ನಗರದ ಬಸ್ ನಿಲ್ದಾಣದ ಎದುರಿಗೆ ರೈಲ್ವೇ ಸ್ಟೇಷನ್ ರಸ್ತೆಯ ಬಾಜು ಇರುವ ಗ್ರ್ಯಾಂಡ್ ಪ್ಯಾಲೇಸ್ ಲಾಡ್ಜದಲ್ಲಿ ಆರೋಪಿತರಾದ [1] ವಿನೋದ ತಂದೆ ವೆಂಕಪ್ಪ ಚಿಲವಾರಿ ಸಾ: ದೇವರಾಜ ಅರಸ ಕಾಲೋನಿ ಕೊಪ್ಪಳ [2] ಅಬ್ದುಲ್ ಜೀಲಾನ ತಂದೆ ಮೈನುದ್ದಿನಸಾಬ ಪೈಮಾಸಿ ಸಾ: ಕುವೆಂಪು ನಗರ ಕೊಪ್ಪಳ ಇವರು ಮಾನ್ಯ ಸರ್ಕಾರದ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳ ವಿಕೆಂಡ್ ಲಾಕಡೌನ್ ಕರ್ಫೂ ಆದೇಶವಿದ್ದು ಸಹ ಉಲ್ಲಂಘಿಸಿ ಅನಧಿಕೃತವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ ಶ್ರೀ ಮಾರುತಿ ಗುಳ್ಳಾರಿ ಪಿ.ಐ. ಕೊಪ್ಪಳ ನಗರ ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿ ಪಂಚರೊಂದಿಗೆ ಹೋಗಿ ದಾಳಿ ಮಾಡಿ 5,413=00 ರೂ ಬೆಲೆಬಾಳುವ ಮದ್ಯವನ್ನು ಜಪ್ತಿ ಮಾಡಿ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ : 15-01-2022 ರಂದು ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹಟ್ಟಿ ಗ್ರಾಮದ ಆರೋಪಿತನ ಕಿರಾಣಿ ಅಂಗಡಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಶಿವಪ್ಪ ತಂದೆ ಮರಿಯಪ್ಪ ಮಲ್ಲಣ್ಣನವರ ಸಾ: ಹಟ್ಟಿ ಇತನು ಯಾವುದೇ ಪರವಾನಿಗೆ ಮತ್ತು ದಾಖಲಾತಿ ಇಲ್ಲದೇ ಅನಧಿಕೃತವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ ಶ್ರೀ ಶೈಲಾ ಎಸ್. ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ 1,165=00 ರೂ ಬೆಲೆಬಾಳುವ ಮದ್ಯವನ್ನು ಜಪ್ತಿ ಮಾಡಿ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 16-01-2022 12:09 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080